ವಿಶ್ವಾಸ: ಮಸೂದೆಯನ್ನು ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು, ‘ತಮಿಳುನಾಡಿನಲ್ಲಿ ಜಾರಿ ಇರುವ ಮೀಸಲಾತಿ ಪದ್ಧತಿಯನ್ನೇ ಈ ಮಸೂದೆಯಲ್ಲಿ ಅಳವಡಿಸಲಾಗಿದ್ದು, ಕೇಂದ್ರ ಸರ್ಕಾರವು ಇದಕ್ಕೆ ಒಪ್ಪಿಗೆ ನೀಡಬೇಕಾಗುತ್ತದೆ’ ಎಂದರು.
‘ತಮಿಳುನಾಡಿನಲ್ಲಿ ಶೇ 69ರಷ್ಟು ಮೀಸಲಾತಿ ಜಾರಿಯಲ್ಲಿ ಇರುವುದರಿಂದ ಶೇಕಡ 62ರಷ್ಟು ಮೀಸಲಾತಿಗೆ ಅವಕಾಶ ನೀಡುವ ಈ ಮಸೂದೆಗೆ ಕೇಂದ್ರ ಒಪ್ಪಿಗೆ ದೊರಕುತ್ತದೆ ಎಂಬ ವಿಶ್ವಾಸವಿದೆ’ ಎಂದು ಹೇಳಿದರು.