ನಂಜನಗೂಡಿನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು, ಮಿಂಚಿನಿಂದ ಕೂಡಿದ ಮಳೆ ಸುರಿಯಿತು. ಮೈಸೂರು ತಾಲ್ಲೂಕಿನ ಹಂಪಾಪುರ ಹೋಬಳಿ, ಚಾಮರಾಜನಗರ ಜಿಲ್ಲಾ ಕೇಂದ್ರ, ಮಲೆಮಹದೇಶ್ವರ ಬೆಟ್ಟ, ಯಳಂದೂರು ಪಟ್ಟಣ ಸೇರಿದಂತೆ ಹಲವೆಡೆ ಬಿರುಗಾಳಿಯಿಂದ ಕೂಡಿದ ಮಳೆಯಾಗಿದೆ.
ಉರುಳಿದ ಬಾಳೆಗಿಡ, ತೆಂಗಿನಮರ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಭಾನುವಾರ ಮಳೆಯಾಗಿದ್ದು, ರೈತರಲ್ಲಿ ಹರ್ಷ ಮೂಡಿದೆ.
ಹೊಸದುರ್ಗ ತಾಲ್ಲೂಕಿನ ಗುಡ್ಡದನೇರಲಕೆರೆಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಬಿರುಗಾಳಿ ಬೀಸಿದ್ದರಿಂದ ಕೆಲವು ಬಾಳೆಗಿಡಗಳು ಹಾಗೂ ತೆಂಗಿನಮರಗಳು ಉರುಳಿಬಿದ್ದಿವೆ. ಕೆಲ್ಲೋಡು ಎಂಬಲ್ಲಿನ ಎ.ಕೆ.ಕಾಲೊನಿಯ ಹನುಮಣ್ಣ ಅವರ ಮನೆಯ ಶೀಟ್ ಹಾರಿಹೋಗಿದೆ.