ಡಿಎಸ್ಪಿ, ಸಿಪಿಐ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ. ಮತ್ತೇ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು. ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದೆ ಎಂದರು.
ಪ್ರತಿಭಟನೆಯಲ್ಲಿ ಧರ್ಮರಾಜ ರಂಗಣ್ಣವರ, ಡಾ.ಎಚ್.ಆರ್. ಹಿರೇಹಾಳ, ವಿನೋದ ಒಡ್ಡರ, ಗುರು ದೊಡಮನಿ, ವಿಜಯ ಚಲವಾದಿ, ಯಶವಂತ ನಡುವಿನಮನಿ, ರಾಮು ನರಗುಂದ, ಬಸು ಸೇರಿದಂತೆ ಡಿಎಸ್ಎಸ್ ಮುಖಂಡರು ಭಾಗವಹಿಸಿದ್ದರು.