ಗುಳೇದಗುಡ್ಡ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಮಂಡಿಸಿದ ಬಜೆಟ್ನಲ್ಲಿ ನೂತನ ಹೊಸ ತಾಲ್ಲೂಕು ಘೋಷಣೆ ಮಾಡಿದ್ದು. ಅವುಗಳಲ್ಲಿ ಜಿಲ್ಲೆಯಲ್ಲಿ ಘೋಷಣೆಯಾದ ಮೂರು ತಾಲ್ಲೂಕುಗಳ ಕಾರ್ಯಾರಂಭ ಮಾಡುವ ಸಲುವಾಗಿ ಸರ್ಕಾರಿ ಕಚೇರಿ ಒಂದಡೆ ಕಾರ್ಯ ನಿರ್ವಹಿಸಲು ಅವಶ್ಯವಿರುವ ಸೂಕ್ತ ಜಾಗ, ಕಟ್ಟಡದ ಬಗ್ಗೆ ಮಾಹಿತಿ ಸಂಗ್ರಹಿಸಬೇಕು ಎಂದು ಅಪರ ಜಿಲ್ಲಾಧಿ ಕಾರಿಗಳು ಆಯಾ ವಿಭಾಗದ ಉಪ ವಿಭಾಗಾಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.