ಚೀನಾದ ಹಿತಾಸಕ್ತಿಯನ್ನು ದುರ್ಬಲಗೊಳಿಸಲು ದಲೈಲಾಮಾ ಅವರನ್ನು ದಾಳವಾಗಿ ಬಳಸಿಕೊಳ್ಳದಂತೆ ಚೀನಾ ಭಾರತಕ್ಕೆ ಎಚ್ಚರಿಕೆ ನೀಡಿದೆ.
ದಲೈಲಾಮಾ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದರಿಂದ ಗಡಿ ಸಮಸ್ಯೆಯು ಮತ್ತಷ್ಟು ಜಟಿಲಗೊಂಡಿದೆ ಎಂದು ಅಭಿಪ್ರಾಯಪಟ್ಟಿದೆ.
‘ಈ ಹಿಂದೆ ಕೆಲ ಕಾರಣಗಳಿಂದಾಗಿ ಭಾರತ ಹಾಗೂ ಚೀನಾದ ರಾಜಕೀಯ ಸಂಬಂಧ ಶಿಥಿಲವಾಗಿತ್ತು. ಈಗ ದಲೈಲಾಮ ಅವರ ಭೇಟಿಯು ಚೀನಾ– ಭಾರತದ ಸಂಬಂಧ ಹಾಗೂ ಗಡಿ ಕುರಿತಾದ ಮಾತುಕತೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿವೆ’ ಎಂದು ಚೀನಾದ ವಿದೇಶಾಂಗ ಇಲಾಖೆಯ ವಕ್ತಾರ ಲು ಕಾಂಗ್ ತಿಳಿಸಿದ್ದಾರೆ.