ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗೆ ನೀರು ಸಂಗ್ರಹದಲ್ಲಿ ವಿಳಂಬ

Last Updated 18 ಏಪ್ರಿಲ್ 2017, 5:24 IST
ಅಕ್ಷರ ಗಾತ್ರ
ಕಾರಟಗಿ: ಸಮೀಪದ ನಾಗನಕಲ್‌ ಬಳಿಯ ರಾಜೀವ್‌ಗಾಂಧಿ ಕುಡಿಯುವ ನೀರಿನ ಕೆರೆಗೆ ತುಂಗಭದ್ರಾ ಎಡದಂಡೆ ಮುಖ್ಯನಾಲೆಯಿಂದ ನೀರು ಹರಿಸಲಾಗುತ್ತಿದೆ. ಆದರೆ ಬೃಹತ್ ಕೆರೆಗೆ ಒಂದು ಮೋಟಾರ್‌ನಿಂದ ನೀರು ಸಂಗ್ರಹಿಸಲಾಗುತ್ತಿರುವುದರಿಂದ ವಿಳಂಬವಾಗುತ್ತಿದೆ.
 
ಕೆರೆಯಲ್ಲಿ ನೀರು ಸಂಗ್ರಹಿಸಿರುವುದರಿಂದ ಬತ್ತುತ್ತಿರುವ ಕೊಳವೆಬಾವಿಗೆ ಮರುಜೀವ ದೊರೆಯುವ ಜೊತೆಗೆ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಿಗೆ ನೀರು ಸರಬರಾಜು ಸುಗಮವಾಗಿ ಮಾಡಬಹುದು ಎಂಬ ನಿರೀಕ್ಷೆ ಇದೆ.
 
ಯೋಜನೆ ಹಸ್ತಾಂತರ ಅಧಿಕೃತವಾಗಿ ನಡೆಯದಿದ್ದರೂ,  ಜನರಿಗೆ ತೊಂದರೆಯಾಗದಿರಲಿ ಎಂಬ ಸದಾಶಯದಿಂದ ಪಟ್ಟಣದ ಪುರಸಭೆ ಆಡಳಿತ ಮಂಡಳಿ ಆಸಕ್ತಿ ವಹಿಸಿ ನೀರು ಸಂಗ್ರಹ ಮಾಡುತ್ತಿದೆ ಎಂದು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್. ಈಶಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT