ವಿದ್ಯಾರ್ಥಿಗಳ ಶುಲ್ಕ ವಿನಾಯಿತಿ ಮಂಜೂರು ಆಗದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು. ಮನವಿ ಸ್ವೀಕರಿಸಿದ ಗ್ರೇಡ್–2 ತಹಶೀಲ್ದಾರ್ರು ಬಿಸಿಎಂ ಇಲಾಖೆ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದಾಗ ಒಂದು ವಾರದ ಒಳಗಾಗಿ ಶುಲ್ಕ ವಿನಾಯಿತಿ ಮಂಜೂರು ಮಾಡಲಾಗುವುದು ಎಂದು ಬಿಸಿಎಂ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. ಸಂತೋಷ ಪಟೇದ ಸುರೇಶ ಜಂಗೋಣಿ, ಮುತ್ತು ಬಸ್ತಾಳ, ರವಿ ಹಿಪ್ಪರಗಿ, ಭೀರೇಶ ಮರಗಲದಿನ್ನಿ, ರಾಯಪ್ಪ ಪೂಜಾರಿ, ಬಸವರಾಜ ಗೊಳಸಂಗಿ ಇತರರಿದ್ದರು.