ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡು ಪ್ರಾಣಿಗಳಿಗೆ ನೀರು

ಬಸವಳಿದ ಪ್ರಾಣಿಗಳು: ಅರಣ್ಯ ಇಲಾಖೆ ಕ್ರಮ
Last Updated 18 ಏಪ್ರಿಲ್ 2017, 6:13 IST
ಅಕ್ಷರ ಗಾತ್ರ
ಗುಡಿಬಂಡೆ: ನೀರಿಗಾಗಿ ಕಾಡು ಪ್ರಾಣಿಗಳು ನಾಡಿನತ್ತ ಮುಖ ಮಾಡುತ್ತಿರುವ ಕಾರಣ ಅರಣ್ಯ ಇಲಾಖೆ ಅಧಿಕಾರಿ ಹುಲುಗಪ್ಪ ಮತ್ತು ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ಕಾಡಿನಲ್ಲಿಯೇ ಕುಡಿಯುವ ನೀರು ದೊರೆಯುವ ವ್ಯವಸ್ಥೆ ಮಾಡುತ್ತಿದ್ದಾರೆ.
 
ಆಹಾರ ಮತ್ತು ನೀರು ಅರಸಿ ಪ್ರಾಣಿಗಳು ನಾಡಿನತ್ತ ಬರುತ್ತಿರುವ ಘಟನೆಗಳು ತಾಲ್ಲೂಕಿನಲ್ಲಿ ಇತ್ತೀಚೆಗೆ ಹೆಚ್ಚುತ್ತಿವೆ. ಕೆಲವು ಪ್ರದೇಶಗಳಲ್ಲಿ ಗುಂಡಿ ತೆಗೆದು ಅಲ್ಲಿಗೆ ನೀರು ತುಂಬಿಸುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಪರಿಸರ ಹಾಗೂ ವನ್ಯಜೀವಿ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
 
‘ಕಾಡಿನಲ್ಲಿರುವ ಕೆರೆ ಕುಂಟೆಗಳು ಬತ್ತಿವೆ. ಕೆಲವು ದಿನಗಳ ಹಿಂದೆ ನೀರು ಹುಡುಕಿ ಬಂದ ಜಿಂಕೆ ಗಾಯ ಗೊಂಡಿತ್ತು. ಇಲಾಖೆ  ಅಧಿಕಾರಿ ಜಾವೀದ್ ರಕ್ಷಿಸಿ ಕಾಡಿಗೆ ಬಿಟ್ಟಿದ್ದರು.

ಮುಂದೆ ಈ ರೀತಿಯ ಅನಾಹುತಗಳ ನಡೆಯಬಾರದು ಎಂದು ಕಾಡಿನಲ್ಲಿ ಅಲ್ಲಲ್ಲಿ ಹೊಂಡಗಳನ್ನು ತೆಗೆಸಿ, ಪಾಲಿಥಿನ್ ಹೊದಿಕೆ ಹೊದಿಸಿ ಟ್ಯಾಂಕರ್ ಮೂಲಕ ನೀರು ತುಂಬಿಸುತ್ತಿದ್ದೇವೆ’ ಎಂದು ತಿಳಿಸಿದರು ಹುಲುಗಪ್ಪ. ‘ಮಳೆಗಾಲ ಪ್ರಾರಂಭವಾಗುವವರೆಗೂ  ನೀರು ತುಂಬಿಸುವ ವ್ಯವಸ್ಥೆ ಮಾಡಲಾಗಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT