ಇನ್ನು ಮುಂದೆ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 7ಕೆ.ಜಿ. ಅಕ್ಕಿ ದೊರೆಯಲಿದೆ. ಅಡುಗೆ ಅನಿಲ ಸಂಪರ್ಕ ಹೊಂದಿದ ಕುಟುಂಬಗಳಿಗೆ ಈ ಹಿಂದೆ ಸೀಮೆಎಣ್ಣೆ ನೀಡಲಾಗುತ್ತಿರಲಿಲ್ಲ. ಈಗ ಪ್ರತಿ ತಿಂಗಳು ಒಂದು ಲೀಟರ್ ಸೀಮೆಎಣ್ಣೆ ವಿತರಿಸಲಾಗುವುದು ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಬಿ.ರಘುನಾಥ, ಜಿಲ್ಲೆಯಲ್ಲಿ 10,090 ಅಂತ್ಯೋದಯ ಕಾರ್ಡ್ಗಳು, 9,64,701 ಬಿಪಿಎಲ್ ಸದಸ್ಯರಿಗೆ 2,50,883 ಬಿಪಿಎಲ್ ಕಾರ್ಡುಗಳು ಮತ್ತು 82,347 ಎಪಿಎಲ್ ಸದಸ್ಯರಿಗೆ 14,435 ಎಪಿಎಲ್ ಕಾರ್ಡುಗಳಿವೆ. ಅಂತ್ಯೋದಯ ಪಡಿತರ ಚೀಟಿಗಳಿಗೆ ತಲಾ 35 ಕೆ.ಜಿ. ಅಕ್ಕಿ ಹಾಗೂ ಬಿಪಿಎಲ್ ಕಾರ್ಡುಗಳ ಸದಸ್ಯರಿಗೆ ತಲಾ 7ಕೆ.ಜಿ. ಅಕ್ಕಿಯನ್ನು ಜಿಲ್ಲೆಯಾದ್ಯಂತ ವಿತರಿಸಲಾಗುತ್ತಿದೆ ಎಂದರು.ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಉಪವಿಭಾಗಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಸಂತೋಷ ಶಂಕರ ರೇಣಕೆ, ಪುರಸಭೆ ಅಧ್ಯಕ್ಷ ಉಮೇಶ ಬೋಳಶೆಟ್ಟಿ ಉಪಸ್ಥಿತರಿದ್ದರು.