ಹೈದರಾಬಾದ್: ತೆಲಂಗಾಣದ ಕೆಲವೆಡೆ ಕಳೆದ ವಾರದಿಂದ ಬಿಸಿಲಿನ ತಾಪ ಏರುತ್ತಿದ್ದು, ಬಿಸಿಲಿನ ಝಳಕ್ಕೆ 21 ಮಂದಿ ಸಾವನ್ನಪ್ಪಿದ್ದಾರೆ.
ಬಿಸಿಲಿನ ತಾಪಕ್ಕೆ ಜನರು ಅಕ್ಷರಶಃ ತತ್ತರಿಸಿದ್ದು, ಮನೆಯಿಂದ ಹೊರಗೆ ಹೋಗಲು ಭಯಪಡುತ್ತಿದ್ದಾರೆ. ಹೈದರಾಬಾದ್ ಸೇರಿದಂತೆ ನೆಲಗೊಂಡ, ನಿಜಾಮಾಬಾದ್, ವಾರಂಗಲ್, ರಂಗರೆಡ್ಡಿ ಜಿಲ್ಲೆಗಳಲ್ಲಿ 44 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.
ಮುಂದಿನ 48 ಗಂಟೆಗಳವರೆಗೂ ಬಿಸಿಲಿನ ತಾಪ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.