ಹೊಸನಗರ: ‘ಪರಿಸರ ರಕ್ಷಣೆ, ಭ್ರಷ್ಟಾಚಾರ ವಿರೋಧಿ ನೀತಿ ಹಾಗೂ ಮಾನವ ಹಕ್ಕುಗಳ ಹೋರಾಟಕ್ಕೆ ಪ್ರತಿಯೊಬ್ಬರೂ ಬದ್ಧರಾಗಬೇಕು’ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ ಸಿ. ಬಾದಾಮಿ ಹೇಳಿದರು.
ರಾಮಕೃಷ್ಣ ವಿದ್ಯಾ ಸಂಸ್ಥೆಯ ವಿವೇಕಾನಂದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ದೆಹಲಿಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ತಾಲ್ಲೂಕು ಘಟಕವನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕು ಘಟಕದ ನೂತನ ಅಧ್ಯಕ್ಷ ದುಮ್ಮಾ ರೇವಣಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಅಧ್ಯಕ್ಷ ಡಾ.ಮೋಹನ್ ರಾವ್ ನಲ್ವಡೆ, ರಾಜ್ಯ ಸಂಚಾಲಕರು ಶಕ್ತಿ ಪಾಟೀಲ್, ಮುನ್ಸಿಫ್ ನ್ಯಾಯಾಧೀಶ ಯೋಗೀಶ್, ತಹಶೀಲ್ದಾರ್ ಚಂದ್ರಶೇಖರ ನಾಯ್ಕ, ಅಬಕಾರಿ ನಿರೀಕ್ಷಕ ಸುಜಾತ, ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ, ರಾಮಕೃಷ್ಣ ವಿದ್ಯಾ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ದೇವರಾಜ್ ಹಾಜರಿದ್ದರು.
ಬೇಳೂರು ದೇವೇಂದ್ರಪ್ಪ ಸ್ವಾಗತಿಸಿದರು. ಕಾರ್ಯದರ್ಶಿ ಗಂಗಾಧರಯ್ಯ ಕಾರ್ಯಕ್ರಮ ನಿರೂಪಿಸಿದರು. ಬಂದಗಳಲೆ ಮಲ್ಲಿಕಾರ್ಜುನ ಗೌಡ ವಂದಿಸಿದರು.