ಪಟ್ಟಣ ಪಂಚಾಯ್ತಿ ಪ್ರಭಾರ ಅಧ್ಯಕ್ಷ ಉಸ್ಮಾನ ಬಾತಖಂಡಿ ಮಾತನಾಡಿ, ‘ಈ ಯೋಜನೆ ಅನುಷ್ಠಾನದಿಂದ ಪಟ್ಟಣದ ಜನತೆಯ ಕುಡಿಯುವ ನೀರಿನ ದಾಹವನ್ನು ನೀಗಿಸಲು ಸಾಧ್ಯವಾಗುತ್ತದೆ. ಈ ಯೋಜನೆಗೆ ಸರ್ಕಾರದ ಅನುದಾನ ಅಗತ್ಯವಿದೆ. ರಾಜ್ಯ ಸಂಪುಟದಲ್ಲಿ ಈ ವಿಷಯ ಪ್ರಸ್ತಾಪ ಮಾಡಲು ಶಾಸಕರಿಗೆ ಮನವಿ ಮಾಡಲಾಗುವುದು. ನಂತರ ಟೆಂಡರ್ ಕರೆದು ಮುಂದಿನ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದರು.ಜಲ ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಬಸವರಾಜ ಕಡೇಮನಿ ಹಾಗೂ ದೀಪಕ್ ಕಿತ್ತೂರ ಮತ್ತಿತರರು ಇದ್ದರು.