ಭದ್ರಾವತಿ: ಬೇಸಿಗೆ ರಜೆಯಲ್ಲೂ ಮಧ್ಯಾಹ್ನ ಬಿಸಿಯೂಟ ನೀಡುವ ಯೋಜನೆ ತಾಲ್ಲೂಕಿನ 187 ಶಾಲೆಗಳಲ್ಲಿ ನಡೆಯುತ್ತಿದ್ದು, ಶೇ 50ರಷ್ಟು ಮಕ್ಕಳು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ.ಒಂದೆಡೆ ದಾಸೋಹ ನಡೆಯುತ್ತಿದ್ದರೆ, ಮತ್ತೊಂದೆಡೆ ‘ಬೇಸಿಗೆ ಸಂಭ್ರಮ’ ಕಳೆ ಕಟ್ಟಿದೆ. 17 ಕಡೆ ‘ಬೇಸಿಗೆ ಸಂಭ್ರಮ’ ಆರಂಭವಾಗಿದೆ. ವಿದ್ಯಾರ್ಥಿಗಳು ಹಾಜರಾಗಲೇಬೇಕು ಎಂಬ ನಿಯಮವಿಲ್ಲ. ಬಂದಷ್ಟು ಮಕ್ಕಳಿಗೆ ಊಟ ನೀಡಲಾಗಿದೆ ಎನ್ನುತ್ತಾರೆ ಅಕ್ಷರ ದಾಸೋಹ ಅಧಿಕಾರಿ ರಾಜಪ್ಪ.