‘ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗಾಗಿ ಸುಸಜ್ಜಿತ ವಸತಿ ಶಾಲೆಗಳನ್ನು ನಿರ್ಮಿಸ ಲಾಗುತ್ತಿದೆ. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ರಾಜ್ಯ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಅನ್ನಭಾಗ್ಯ ಯೋಜನೆ ಹಸಿವು ಮುಕ್ತ ಸಮಾಜ ನಿರ್ಮಾಣದ ಹಿನ್ನೆಲೆಯಲ್ಲಿ ಕ್ರಾಂತಿಕಾರಕ ಯೋಜನೆ ಯಾಗಿದೆ ಎಂದು ಹೇಳಿದರು.
ಮುಖಂಡ ಕಿತ್ತೂರು ಜಯಣ್ಣ, ವಕೀಲ ಡಿ. ಶ್ರೀನಿವಾಸ್, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಚಿತ್ತಪ್ಪ, ದಲಿತ ಮುಖಂಡ ಜಿ.ಎಚ್. ಶಂಭುಲಿಂಗಪ್ಪ, ಎ.ಎಂ.ಕೊಟ್ರೇಶ್, ಶಿವಕುಮಾರ್, ನಾಗಲಿಂಪ್ಪ, ಹನುಮಂತಪ್ಪ, ಹಟ್ಟಿ ತಿಪ್ಪೇಸ್ವಾಮಿ, ಚಂದ್ರಮೌಳಿ, ಮಂಜುನಾಥ್ ಗೌಡ ಹಾಜರಿದ್ದರು.