‘ಯಂತ್ರಗಳನ್ನು ಬಳಸಿ ಮರಳು ಗಣಿಗಾರಿಕೆ ನಡೆಸುವುದು ನಿಯಮ ಬಾಹಿರ. ನದಿ ಒಡಲಿನ ಮೂರು ಅಡಿಯಷ್ಟು ಆಳದಲ್ಲಿರುವ ಮರಳನ್ನು ತೆದುಕೊಳ್ಳಬೇಕೆಂಬ ಷರತ್ತಿನ ಮೇಲೆ ಗುತ್ತಿಗೆ ನೀಡಲಾಗಿರುತ್ತದೆ. ಆದರೆ, ಗುತ್ತಿಗೆದಾರರು ನಿಯಮ ಮೀರಿ ನದಿ ಒಡಲಿನಲ್ಲಿ ಯಂತ್ರಗಳನ್ನು ಬಳಸಿ ಮರಳು ದಂಧೆ ನಡೆಸುತ್ತಿದ್ದಾರೆ. ಈ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ, ಸಾರಿಗೆ ಅಧಿಕಾರಿ, ಕಂದಾಯ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ, ಕ್ರಮ ಕೈಗೊಂಡಿಲ್ಲ. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಿರುವ ಜಿಲ್ಲಾಧಿಕಾರಿ ಖುಷ್ಬೂ ಗೋಯೆಲ್ ಚೌಧರಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಲಾಗುವುದು’ ಎಂದರು.