ಮೇ 6 ರಂದು ನವದೆಹಲಿಯಲ್ಲಿ ಅಖಿಲ ಭಾರತ ಪೆಟ್ರೋಲಿಯಂ ವರ್ತಕರ ಸಂಘದ ಸಭೆ ನಡೆಯಲಿದೆ. ಅಲ್ಲಿ ಈ ವಿಷಯ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳ ಲಾಗುವುದು. ಆದರೆ, ಸಾರ್ವಜನಿಕರಿಗೆ ಅನಾನುಕೂಲ ಆಗುವಂತಹ ಯಾವುದೇ ನಿರ್ಣಯ ಕೈಗೊಳ್ಳುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.‘ನಮ್ಮ ಸಂಘಟನೆ ವ್ಯಾಪ್ತಿಗೆ ರಾಜ್ಯದ 23 ಜಿಲ್ಲೆಗಳಲ್ಲಿರುವ ಪೆಟ್ರೋಲ್ ಪಂಪ್ಗಳು ಬರುತ್ತವೆ. ಕಮಿಷನ್ ನಿಗದಿಗೆ ಸಂಬಂಧಿಸಿದಂತೆ ನಮಗೂ ಅಸಮಾಧಾನವಿದೆ. ಆದರೆ, ಸಾರ್ವಜನಿಕರಿಗೆ ತೊಂದರೆ ಮಾಡುವ ಉದ್ದೇಶವಿಲ್ಲ’ ಎಂದಿದ್ದಾರೆ.