ನಗರಸಭೆ ವ್ಯಾಪ್ತಿಯ 31ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮವಹಿಸಬೇಕು. ವಾರ್ಡ್ಗಳಲ್ಲಿ ಈಗಾಗಲೇ, ಪ್ರಗತಿಯಲ್ಲಿರುವ ಕುಡಿಯುವ ನೀರು ಸೇರಿದಂತೆ ಸಿ.ಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.ಬೇಸಿಗೆ ವೇಳೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು ಎಂಬ ದೃಷ್ಟಿಯಿಂದ ನಗರದ ಎಲ್ಲ ವಾರ್ಡ್ಗಳಿಗೆ ಕೊಳವೆ ಬಾವಿ ಕೊರೆಯಿಸಲು ತಲಾ ₹ 1 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಸಮಸ್ಯೆ ಇರುವ ವಾರ್ಡ್ಗಳಲ್ಲಿ ಶೀಘ್ರವೇ ಕೊಳವೆ ಬಾವಿ ಕೊರೆಯಿಸಬೇಕು. ಜತೆಗೆ, ಎಲ್ಲ ವಾರ್ಡ್ಗಳಿಗೂ ಭೇಟಿ ನೀಡಿ ಅಲ್ಲಿನ ಮೂಲ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸೂಚಿಸಿದರು.