ಬೆಂಗಳೂರು: ‘ತಮಿಳು ನಟ ಸತ್ಯರಾಜ್ ಅವರ ಹೇಳಿಕೆಗೂ ನಮಗೂ ಯಾವುದೇ ಸಂಬಂಧವಿಲ್ಲ, ಅದು ಅವರ ವೈಯಕ್ತಿಕ ಹೇಳಿಕೆ, ಅವರ ಮೇಲಿನ ಕೋಪವನ್ನು ಬಾಹುಬಲಿ–2 ಸಿನಿಮಾದ ಮೇಲೆ ತೋರಿಸಬಾರದು’ ಎಂದು ನಿರ್ದೇಶಕ ಎಸ್.ಎಸ್.ರಾಜಮೌಳಿ ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ.
ವಿಡಿಯೊ ಹೇಳಿಕೆ ಮತ್ತು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಸತ್ಯರಾಜ್ ಅವರ ಕನ್ನಡ ವಿರೋಧಿ ಹೇಳಿಕೆ ಬಗ್ಗೆ ಕನ್ನಡಪರ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಅವರು ಕ್ಷಮೆ ಕೋರುವವರೆಗೂ ರಾಜ್ಯದಲ್ಲಿ ಬಾಹುಬಲಿ –2 ಸಿನಿಮಾ ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿವೆ. ಸಿನಿಮಾ ಬಿಡುಗಡೆಯಾಗುವ ದಿನ ಏಪ್ರಿಲ್ 28ರಂದು ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ಗೂ ಕರೆಕೊಟ್ಟಿವೆ.
ಈ ಹಿನ್ನೆಲೆಯಲ್ಲಿ ಬಾಹುಬಲಿ–2 ಸಿನಿಮಾದ ನಿರ್ದೇಶಕ ರಾಜಮೌಳಿ ಅವರು ಸಿನಿಮಾ ಬಿಡುಗಡೆಗೆ ತೊಂದರೆ ಮಾಡಬಾರದು ಎಂದು ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ.