ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ನಿಧಿ ಯೋಜನೆಯಡಿ ಅವಳಿ ನಗರದ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ ರೂ 368 ಕೋಟಿ ಅನುದಾನ ಒದಗಿಸಿದೆ. ಇದರಲ್ಲಿ ಈಗಾಗಲೇ ರೂ 200 ಕೋಟಿ ಮೊತ್ತದಲ್ಲಿ 109 ಕಿ.ಮೀ. ರಸ್ತೆ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಎಂದು ಹೇಳಿದರು.ಶಾಸಕ ಪ್ರಸಾದ ಅಬ್ಬಯ್ಯ, ಮಹಾನಗರ ಪಾಲಿಕೆ ಮೇಯರ್ ಡಿ.ಕೆ.ಚವ್ಹಾಣ, ಸದಸ್ಯ ಶಿವು ಮೆಣಸಿನಕಾಯಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಾಜಿ ಶಾಸಕ ಅಶೋಕ ಕಾಟವೆ, ಬಿಜೆಪಿ ಮುಖಂಡರಾದ ಲಕ್ಷ್ಮಣ ಬೀಳಗಿ, ಗೋಪಾಲ ಬದ್ನಿ, ರಂಗ ಬದ್ನಿ, ಸಂತೋಷ ಅರಕೇರಿ, ದೀಪಕ್ ಮೆಹರವಾಡೆ, ರಾಜು ಕೊರನಮಠ ಇದ್ದರು.