ನಗರಸಭೆ ಸದಸ್ಯರಾದ ವೇಣುಗೋಪಾಲ್, ಕೆ. ಮಲ್ಲಪ್ಪ, ನಗರಸಭೆ ಕಂದಾಯ ವಿಭಾಗದ ಸಿಬ್ಬಂದಿ ಪಂಪಾಪತಿ, ನಾಗಮ್ಮ, ನೀಲಕಂಠ ಸ್ವಾಮಿ ಹಾಗೂ ಜಿ. ಅನಿಲ್ ಕುಮಾರ್ ಅವರನ್ನು ನಾಲ್ಕು ದಿನಗಳ ವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪಟ್ಟಣ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಲಿಂಗನಗೌಡ ನೆಗಳೂರು ‘ಪ್ರಜಾವಾಣಿ’ಗೆ ತಿಳಿಸಿದರು. ಎಲ್ಲ ಆರು ಜನರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನ ವಿಚಾರಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.