ಬಾಗಲಕೋಟೆ: ‘ಬಿಜೆಪಿಯವರು ಮೂರ್ಖರು. ಅವರಿಗೆ ತಲೆ ಇದೆಯೋ ಇಲ್ಲವೋ ಗೊತ್ತಿಲ್ಲ. ಪ್ರಜಾತಂತ್ರದ ಬಗ್ಗೆ ಅರಿವಿಲ್ಲದೇ ಕಾಂಗ್ರೆಸ್ ಮುಕ್ತ ಕರ್ನಾಟಕ, ಭಾರತ ಮಾಡುವುದಾಗಿ ಹೇಳುತ್ತಿದ್ದಾರೆ. ಅದನ್ನು ಮಾಡಬೇಕಾದವರು ಮತದಾರರು. ಆ ರೀತಿ ಮಾತನಾಡಿದ ಕಾರಣಕ್ಕೇ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ವ್ಯಂಗ್ಯವಾಡಿದರು.