ಸೂಳೆಕೆರೆಯಲ್ಲಿ ದೋಣಿವಿಹಾರ ಕೇಂದ್ರ ಹಾಗೂ ಯಾತ್ರಿ ನಿವಾಸ ನಿರ್ಮಿಸಲಾಗಿದೆ. ಆದರೆ ಇದುವರೆಗೆ ಪ್ರವಾಸಿಗರಿಗೆ ಮಾತ್ರ ಯಾವುದೇ ರೀತಿಯ ಅನುಕೂಲ ಆಗಿಲ್ಲ.
ನಿವಾಸದ ಸುತ್ತಮುತ್ತ ಯಥೇಚ್ಛ ವಾಗಿ ಗಿಡಗಂಟಿಗಳು ಬೆಳೆದಿದ್ದು, ಭೂತ ಬಂಗಲೆಯಂತೆ ಕಾಣುತ್ತಿದೆ. ಇದರಿಂದ ಸೂಳೆಕೆರೆಗೆ ಬರುವ ಪ್ರವಾಸಿಗರ ಸಂಖ್ಯೆಯೇ ಕಡಿಮಯಾಗುತ್ತಿದೆ. ಮುಂದಿನ ದಿನಗಳಲ್ಲಿಯಾದರೂ ಪ್ರವಾ ಸೋದ್ಯಮ ಇಲಾಖೆ ಅಧಿಕಾರಿಗಳು ಈ ಯಾತ್ರಿ ನಿವಾಸವನ್ನು ಪ್ರವಾಸಿಗರಿಗೆ ಕಲ್ಪಿಸಿಕೊಡಲು ಮುಂದಾಗುವುದು ಅಗತ್ಯ ಎನ್ನುತ್ತಾರೆ ಪ್ರವಾಸಿಗರಾದ ಶಿವಮೊಗ್ಗದ ರಾಜಶೇಖರಪ್ಪ, ಚಿತ್ರದುರ್ಗದ ರವೀಂದ್ರ.