ಗುರುವಾರ ಬೆಳಗಿನ ಜಾವ ಹಸಿರು ತೋರಣ, ಬಣ್ಣ ಬಣ್ಣದ ಬಟ್ಟೆ, ದೊಡ್ಡ ಹೂ ಮಾಲೆ ಹಾಗೂ ಬಾವುಟಗಳಿಂದ ಸುಂದರವಾಗಿ ಅಲಂಕರಿಸಿದ್ದ ತೇರಿನ ಸುತ್ತ ಸಿಂಗಾರಗೊಂಡಿದ್ದ ಕಂಚೀವರದ ರಾಜಸ್ವಾಮಿ ಮೂರ್ತಿಯನ್ನು ಮೂರು ಸುತ್ತು ಸುತ್ತಿಸಿ ರಥದಲ್ಲಿ ಪ್ರತಿಷ್ಠಾಪಿಸ ಲಾಗಿತ್ತು. ಬಳಿಕ ಈಡುಗಾಯಿ ಸೇವೆ, ಬಲಿಅನ್ನ ಪೂಜೆ, ಮಹಾಮಂಗಳಾರತಿ ಕಾರ್ಯಕ್ರಮ ನಡೆದ ನಂತರ ಭಕ್ತರು ಶ್ರದ್ಧಾಭಕ್ತಿಯಿಂದ ತೇರನ್ನು ಎಳೆದರು. ‘ಕಂಚೀವರದರಾಜ ಸ್ವಾಮಿ ಗೋವಿಂದಾ... ಗೋವಿಂದಾ’ ಎಂಬ ಭಕ್ತರ ಘೋಷಣೆ ಮೊಳಗಿದವು.