ಅಂದು ಶಾಲಾ-ಕಾಲೇಜು, ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿಗಳಿಗೆ ದೀಪಾಲಂಕಾರ ಮಾಡಬೇಕು. ಬೆಳಿಗ್ಗೆ 8.30ಕ್ಕೆ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕುಎಂದು ಹೇಳಿದರು.ಬೆಳಿಗ್ಗೆ 9ಕ್ಕೆ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಮತ್ತು ಗಣ್ಯರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಾಜರಾಗಬೇಕು. ಭಗೀರಥ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ನಡೆಯುವ ಮೆರವಣಿಗೆ ರಂಗಮಂದಿರ ತಲುಪಬೇಕು ಎಂದು ತಿಳಿಸಿದರು.