ಬಸವಕಲ್ಯಾಣ: ಪಟ್ಟಣ ಮತ್ತು ತಾಲ್ಲೂಕಿನಲ್ಲಿನ ಕುಡಿಯುವ ನೀರಿನ ಸಮಸ್ಯೆ ಶೀಘ್ರದಲ್ಲಿ ಬಗೆಹರಿಸಬೇಕು ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು.ಇಲ್ಲಿನ ಮಿನಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ನಗರಸಭೆ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಚುಳಕಿನಾಲಾ ಜಲಾಶಯದಿಂದ ನಿಯಮಿತವಾಗಿ ನೀರು ಸರಬರಾಜು ಮಾಡಬೇಕು. ಪಟ್ಟಣದಲ್ಲಿನ ಕೊಳವೆಬಾವಿಗಳಿಂದಲೂ ನೀರು ಒದಗಿಸಬೇಕು ಎಂದು ಸೂಚಿಸಿದರು.ನಗರಸಭೆ ಅಧ್ಯಕ್ಷ ಅಜರ್ ಅಲಿ ನವರಂಗ, ಪೌರಾಯುಕ್ತ, ಮಹ್ಮದ್ ಯುಸೂಫ್, ತಹಶೀಲ್ದಾರ್ ಕೀರ್ತಿ ಚಾಲಾಕ್ ಪಾಲ್ಗೊಂಡಿದ್ದರು.