ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊ.ಪಾಂಡುರಂಗಿ ನಿಧನ

Last Updated 21 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಇತಿಹಾಸತಜ್ಞ ಪ್ರೊ.ಕೆ.ಟಿ. ಪಾಂಡುರಂಗಿ (98) ಅವರು ಜಯನಗರದಲ್ಲಿರುವ ಸ್ವಗೃಹದಲ್ಲಿ ಶುಕ್ರವಾರ ಬೆಳಿಗ್ಗೆ 8.30ಕ್ಕೆ ನಿಧನರಾದರು.

ಅವರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಚಾಮರಾಜಪೇಟೆಯಲ್ಲಿರುವ ವಿದ್ಯುತ್‌ ಚಿತಾಗಾರದಲ್ಲಿ ಸಂಜೆ 6.30ಕ್ಕೆ ಅಂತ್ಯಕ್ರಿಯೆ ನಡೆಯಿತು.

ಅವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ತುಮ್ಮಿನಕಟ್ಟಿಯಲ್ಲಿ 1918ರಲ್ಲಿ ಜನಿಸಿದರು. ಸಾಂಗ್ಲಿ ಮತ್ತು ಮೈಸೂರಿನ ಮಹಾರಾಜ ಸಂಸ್ಕೃತ ಕಾಲೇಜಿನಲ್ಲಿ ‘ನ್ಯಾಯ’ ಮತ್ತು ‘ವೇದಾಂತ’ವನ್ನು ಆಳವಾಗಿ ಅಧ್ಯಯನ ಮಾಡಿದ ನಂತರ ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ಸಂಸ್ಕೃತದಲ್ಲಿ ಬಿ.ಎ., ಎಂ.ಎ. ಪದವಿ ಪಡೆದರು.

ಬೆಂಗಳೂರು ವಿ.ವಿ ಸಂಸ್ಕೃತ ವಿಭಾಗದಲ್ಲಿ ಶಿಕ್ಷಕರಾಗಿ, ಮುಖ್ಯಸ್ಥರಾಗಿ 35 ವರ್ಷ ಕೆಲಸ ಮಾಡಿದ್ದರು. ಅಪರೂಪದ ಸಂಸ್ಕೃತ ಹಸ್ತಪ್ರತಿಗಳನ್ನು ಸಂಗ್ರಹಿಸಿ, ಅವುಗಳನ್ನು ಡಿಜಿಟಲ್ ರೂಪಕ್ಕೆ ಪರಿವರ್ತಿಸಿದ್ದರು. ವೇದಾಂತ ಮತ್ತು ಪೂರ್ವ ಮೀಮಾಂಸೆಯನ್ನು ಕನ್ನಡ ಮತ್ತು ಇಂಗ್ಲಿಷ್‌ಗೆ ಭಾಷಾಂತರಿಸಿದ್ದರು.  ಮಿಥಿಕ್‌ ಸೊಸೈಟಿಯ ಅಧ್ಯಕ್ಷರಾಗಿ 13 ವರ್ಷ ಕೆಲಸ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT