ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ 24ರಿಂದ

Last Updated 22 ಏಪ್ರಿಲ್ 2017, 7:27 IST
ಅಕ್ಷರ ಗಾತ್ರ
ಬಾಗಲಕೋಟೆ: ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಇದೇ 24 ರಿಂದ 28ರವರೆಗೆ ವಿವಿಧ ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
ಇದೇ 24 ರಂದು ಜಮಖಂಡಿ ನಿರೀಕ್ಷಣಾ ಮಂದಿರ, 25 ರಂದು ಮುಧೋಳದ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರ, 26 ರಂದು ಬಾದಾಮಿ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರ, 27 ರಂದು ಹುನಗುಂದದ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರ ಹಾಗೂ 28 ರಂದು ಬೀಳಗಿ ಜಿ.ಎಲ್.ಬಿ.ಸಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. 
ಮಾಹಿತಿಗೆ ದೂ: 08354– 236170, 236200 ಸಂಪರ್ಕಿಸಲು ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT