‘ಠೇವಣಿ ಇಲ್ಲದೆ ಬಡವರಿಗೆ ಉಚಿತವಾಗಿ ಸಿಲಿಂಡರ್ ವಿತರಿಸುವ ‘ಉಜ್ವಲ’ ಯೋಜನೆಗೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಮೇ ಮೊದಲ ವಾರದಲ್ಲಿ ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಿದ್ದಾರೆ’ ಎಂದರು.‘ಬಡವರಿಗೆ ಉಚಿತವಾಗಿ ಸಿಲಿಂಡರ್ ವಿತರಿಸುವ ಕೆಲಸಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದರೆ, ಪಡಿತರ ಚೀಟಿಗಳನ್ನು ಬಡವರಿಂದ ಕಸಿದುಕೊಳ್ಳುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ’ ಎಂದೂ ಜೋಶಿ ದೂರಿದರು.