ಹಿರಿಯೂರು: ತಾಲ್ಲೂಕಿನ ಜವನಗೊಂಡನಹಳ್ಳಿಯ ಸುವರ್ಣಮುಖಿ ಬಡಾವಣೆಯಲ್ಲಿ ಶನಿವಾರ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 11 ಗುಡಿಸಲುಗಳು ಭಸ್ಮವಾಗಿದ್ದು, ₹ 5 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.ಗುಡಿಸಲುಗಳಲ್ಲಿ ವಾಸಿಸುತ್ತಿದ್ದವರೆಲ್ಲ ಕೂಲಿ ಕಾರ್ಮಿಕರಾಗಿದ್ದು, ಬೆಳಿಗ್ಗೆ ಎಲ್ಲರೂ ಕೆಲಸಕ್ಕೆ ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಗುಡಿಸಲುಗಳಲ್ಲಿದ್ದ ದಿನಬಳಕೆಯ ವಸ್ತುಗಳು ಸುಟ್ಟುಹೋಗಿವೆ ಎಂದು ಪ್ರತ್ಯಕ್ಷದರ್ಶಿಗಳು ಸುದ್ದಿಗಾರರಿಗೆ ತಿಳಿಸಿದರು.