ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಳಂದ: ಬರ ಪರಿಹಾರ ಕಾಮಗಾರಿಗೆ ಆಗ್ರಹ

Last Updated 23 ಏಪ್ರಿಲ್ 2017, 8:27 IST
ಅಕ್ಷರ ಗಾತ್ರ

ಆಳಂದ: ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವು ಪೂರೈಸುವಂತೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ್ಮಿಕರ ಸಂಘದ ನೇತೃತ್ವದಲ್ಲಿ ಶನಿವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಲಾಯಿತು.

ಸಂಘದ ಕಾರ್ಯದರ್ಶಿ ಮೋಹನ ಕಟ್ಟಿಮನಿ ಮಾತನಾಡಿ, ‘ಕಾರ್ಮಿಕರ ಗುಳೆ ತಪ್ಪಿಸಲು ಉದ್ಯೋಗ ಖಾತ್ರಿ ಕಾರ್ಯಕ್ರಮ ಸಮರ್ಪಕವಾಗಿ ಜಾರಿಗೋಳಿಸಬೇಕು, ಬಾಕಿವೇತನ ಪಾವಸಬೇಕು. ಕೂಲಿಕಾರ್ಮಿಕರಿಗೆ ಆಹಾರಧಾನ್ಯ ವಿತರಣೆ, ನೀರಿನ ಸಮಸ್ಯೆಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಬೇಕು’ ಎಂದು ಒತ್ತಾಯಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸಂಜಯ ರೆಡ್ಡಿ ಮನವಿ ಸ್ವೀಕರಿಸಿದರು.ಹೋರಾಟಗಾರರಾದ ಜಯಶ್ರೀ ಕಟ್ಟಿಮನಿ, ಮಲ್ಲಪ್ಪ ಪೂಜಾರಿ, ಶ್ರೀಪತಿ ಹೊಡಲ, ಸಾವಿತ್ರಿ ಜಮಾದಾರ, ಅಶೋಕ ಚಟ್ಟಿ, ಶಾಂತಾಬಾಯಿ ಹೊಡಲ, ಬಾಬು ಮುರಡಿ, ಮಾಯಮ್ಮ ಹಿಪ್ಪರಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT