ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಎರಡು ತಾಸು ಕಾರ್ಯಾಚ ರಣೆ ನಡೆಸಿ ಬೆಂಕಿ ಆರಿಸಿದರು.ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.ಬೆಂಕಿ ಅವಘಡದಲ್ಲಿ ಸುಮಾರು ₹75 ಲಕ್ಷ ಮೌಲ್ಯದ ವಸ್ತುಗಳು ಸುಟ್ಟಿವೆ ಎಂದು ಅಂಗಡಿ ಮಾಲೀಕ ಅಮೀತ್ ಶೇಠ್ ಹೇಳಿದ್ದಾರೆ.
ತಹಶೀಲ್ದಾರ್ ಶಂಕರಪ್ಪ, ಪೊಲೀಸ್ ಉಪವಿಭಾಗಾಧಿಕಾರಿ ಶ್ರೀಧರ್ ಮಾಳಿಗೇರ್, ಸರ್ಕಲ್ ಇನ್ಸ್ಪೆಕ್ಟರ್ ರಮೇಶ ರೊಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.