ಒಂದು ತಿಂಗಳಲ್ಲಿ ಎಲ್ಲ ಕಾರ್ಮಿಕರ ನೋಂದಣಿ ಮಾಡಬೇಕು’ ಎಂದು ಒತ್ತಾಯಿಸಿದರು.‘ತುಂಗಭದ್ರಾ ನೀರಾವರಿ ವಲಯದ ಹಂಗಾಮಿ ಕಾರ್ಮಿಕರ ಬೇಡಿಕೆಗಳು ಕಾನೂನಾತ್ಮಕವಾಗಿದ್ದು, ಬೇಡಿಕೆ ಈಡೇರಿಸಬೇಕು. ಸಂಘಟಿತ ಕ್ಷೇತ್ರ ಹಾಗೂ ಸರ್ಕಾರದಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಕಾರ್ಮಿಕರ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು’ ಎಂದು ಮನವಿ ಮಾಡಿದರು.ಪ್ರತಿಭಟನೆಯಲ್ಲಿ ಗುರುರಾಜ, ಮೋಕ್ಷಮ್ಮ, ದುರ್ಗಶ್ರೀ, ಶಾಂಭವಿ, ಹುಲಿಗೆಮ್ಮ, ಮರಿಯಮ್ಮ, ರಂಗಮ್ಮ, ಸಾವಿತ್ರಿ, ಮಾಳೆಮ್ಮ ಇದ್ದರು.