ಸೂಲಿಬೆಲೆ: ಇಲ್ಲಿನ ಪದವಿ ಕಾಲೇಜಿನಲ್ಲಿ 2016-17ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಜರುಗಿತು.
ಶಾಸಕ ಎನ್.ನಾಗರಾಜ ಮಾತನಾಡಿ, ‘ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸುಲಭವಾಗಿ ಸಿಗಲೆಂದು ಸೂಲಿಬೆಲೆಯಲ್ಲಿ ಪದವಿ ಕಾಲೇಜನ್ನು ಸ್ಥಾಪಿಸಲಾಯಿತು. ಆದರೆ, ಇಲ್ಲಿನ ವಿದ್ಯಾರ್ಥಿಗಳು ನಗರ ಪ್ರದೇಶದ ಕಾಲೇಜುಗಳಿಗೆ ಹೋಗುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.
ಕವಿ ಡಾ.ಯಲ್ಲಪ್ಪ ಮಾತನಾಡಿ, ‘ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು. ಇದಕ್ಕೆ ಪೋಷಕರು ಸಹಕಾರ ನೀಡಬೇಕು’ ಎಂದರು.