ನಗರದಲ್ಲಿರುವ ಶಾಸಕ ಡಿ. ಸುಧಾಕರ್ ಕಚೇರಿ ಮುಂಭಾಗದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 1,000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹ 5 ಲಕ್ಷ ಪರಿಹಾರ ವಿತರಿಸಿದೆ. ಮೋದಿ ಅವರ ಭಾಷಣಗಳಲ್ಲಿ ರೈತರ ಬವಣೆಗಳ ಒಂದು ಮಾತೂ ಇಲ್ಲದಿರುವುದು ಬೇಸರ ತಂದಿದೆ ಎಂದರು.