ಉಪ್ಪುಂದ (ಬೈಂದೂರು): ಇಲ್ಲಿನ ಶಾಲೆ ಬಾಗಿಲು ಎಂಬಲ್ಲಿ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಇದೇ 28ರಂದು ಹಸೆಮಣೆ ಯೇರಬೇಕಿದ್ದ ಯುವಕ ಮೃತಪಟ್ಟಿದ್ದಾರೆ.ಭಟ್ಕಳದ ಕೆ.ಬಿ.ರೋಡ್ ನಾಗುಮನೆ ನಿವಾಸಿ ಗಣೇಶ (31) ಮೃತರು. ಬೈಕ್ ಸಹಿತ ಬಿದ್ದ ಅವರ ತಲೆ ರಸ್ತೆಗೆ ಅಪ್ಪಳಿಸಿದ ಕಾರಣ ಗಂಭೀರವಾಗಿ ಗಾಯಗೊಂಡರು. ಸಾರ್ವಜನಿಕರು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಅಲ್ಲಿಂದ ಉಡುಪಿಗೆ ಹೋಗುವ ದಾರಿಯಲ್ಲಿ ಅವರು ಮೃತಪಟ್ಟರು.ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಅವರ ತಾಯಿ ದುರ್ಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ.