ಕೊಟ್ಟೂರು : ಕೆರೆ ಸ್ವಚ್ಚತೆಗೆ ಮುಂದಾಗಿರುವ ಯುವಪಡೆ, ವ್ಯಾಪಾರಿಗಳು, ಸಂಘಸಂಸ್ಥೆಗಳ ಕಾರ್ಯ ನಿಜಕ್ಕೂ ಅಭಿನಂದನಾರ್ಹವಾಗಿದೆ ಎಂದು ಶಾಸಕ ಎಸ್.ಭೀಮನಾಯ್ಕ ಹೇಳಿದರು.ಪಟ್ಟಣದ ಕೆರೆಯ ಅಂಗಳದಲ್ಲಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯವನ್ನು ಭಾನುವಾರ ವೀಕ್ಷಿಸಿ ಮಾತನಾಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದು ಕೆರೆಯ ಹೂಳೆತ್ತಲು ನೀಡುವ ₹1 ಕೋಟಿ ಅನುದಾನವನ್ನು 2017–18ನೇ ಸಾಲಿನಲ್ಲಿ ಮಂಜೂರು ಮಾಡುವುದಾಗಿ ತಿಳಿಸಿದರಲ್ಲದೆ ಸುಮಾರು 800 ಎಕರೆ ವಿಸ್ತೀರ್ಣ ಹೊಂದಿರುವ ಈ ಕೆರೆಯ ಹೂಳೆತ್ತಲು ₹1 ಕೋಟಿ ಸಾಲದು ಅದಕ್ಕಾಗಿ ಮುಖ್ಯಮಂತ್ರಿಗಳನ್ನು ಹಾಗೂ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಸುಮಾರು 5 ಕೋಟಿ ಹಣವನ್ನು ಹೂಳೆತ್ತಲು ವಿಶೇಷ ಅನುದಾನ ತರುವುದಾಗಿ ತಿಳಿಸಿದರು.