ಪ್ರತಿಭಟನೆಗೆ ಸೂಕ್ತ ಸ್ಪಂದನೆ ದೊರೆತಿರಲಿಲ್ಲ. ಈಗ ಅಪಘಾತ ಸಂಭವಿಸಿದ್ದರಿಂದ ಗ್ರಾಮಸ್ಥರು ಮತ್ತೆ ಪ್ರತಿಭಟನೆ ನಡೆಸಿದರು.ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪಿ.ಎಸ್. ಚನಗೊಂಡ, ಸಿಪಿಐ ಸುನಿಲಕುಮಾರ ನಂದೇಶ್ವರ, ನಗರ ಪೊಲೀಸ್ ಠಾಣೆಯ ಪಿಎಸ್ಐ ಪಿ.ಎನ್. ಮನಗೂಳಿ ಭೇಟಿ ನೀಡಿದ್ದಾರೆ.ಆದರೆ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.ಅಪಘಾತದಲ್ಲಿ ಸಾವನ್ನಪ್ಪಿರುವ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.