ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಮೇಶ್ವರ್‌ ಅವರಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ

Last Updated 24 ಏಪ್ರಿಲ್ 2017, 9:51 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದಿರುವ ಘಟನೆ ಸೋಮವಾರ ನಡೆದಿದೆ.

ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಈ ಘಟನೆ ಜರುಗಿದೆ. ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರಿದ್ದ ಹೆಲಿಕಾಪ್ಟರ್‌ ಮೇಲಕ್ಕೆ ಹಾರಿದ  ಕೆಲವೇ ಕ್ಷಣಗಳಲ್ಲಿ ಹದ್ದು ಡಿಕ್ಕಿ ಹೊಡೆದಿದೆ ನಂತರ ಪೈಲೆಟ್ ಹೆಲಿಕಾಪ್ಟರ್‌ ಅನ್ನು ಕೆಳಗೆ ಇಳಿಸಿದ್ದಾರೆ.

ತಾಂತ್ರಿಕ ಸಿಬ್ಬಂದಿಗಳು ಹೆಲಿಕಾಪ್ಟರ್‌ ಅನ್ನು ಪರಿಶೀಲಿಸಿದ್ದಾರೆ. ಯಾವುದೇ ತೊಂದರೆ ಇಲ್ಲ ಎಂದು ಅವರು ತಿಳಿಸಿದ ಬಳಿಕ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಶ್ರವಣಬೆಳಗೊಳಕ್ಕೆ ಪ್ರಯಾಣ ಬೆಳೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT