ಗ್ರಾಮದಲ್ಲಿ ಬಾಲಕನೊಬ್ಬನ ಮೇಲೆ ಚಿರತೆ ದಾಳಿ ನಡೆದಿದ್ದು ರಕ್ಷಣೆಗಾಗಿ ಅರಣ್ಯಾಧಿಕಾರಿ ವಿಜಯಾನಂದ ಖುಂತಾ ಅವರಿಗೆ ಕರೆ ಕಳಹಿಸಲಾಗಿತ್ತು. ಚಿರತೆ ಸೆರೆ ಕಾರ್ಯಾಚರಣೆ ಸಂದರ್ಭ ಕಟ್ಟಡವೊಂದರ ಚಾವಣಿಯಲ್ಲಿದ್ದ ಅರಣ್ಯಾಧಿಕಾರಿ ಮೇಲೆ ಅದು ದಾಳಿ ನಡೆಸಿದೆ. ತಪ್ಪಿಸಿಕೊಳ್ಳುವ ಸಲುವಾಗಿ ಅವರು ತಕ್ಷಣವೇ ಕೆಳಕ್ಕೆ ನೆಗೆದಿದ್ದಾರೆ. ಈ ವೇಳೆ, ಸ್ಥಳದಲ್ಲಿ ಜಮಾಯಿಸಿದ್ದ ಜನರೂ ದಿಕ್ಕಾಪಾಲಾಗಿ ಓಡಿದ್ದಾರೆ.