ಗೋವಾ ಸರ್ಕಾರದ ನಿರ್ಧಾರ ಖಂಡಿಸಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ತಮ್ಮ ನೇತೃತ್ವದಲ್ಲಿ ಗೋವಾಕ್ಕೆ ತೆರಳಿ ಒಕ್ಕೂಟ ವ್ಯವಸ್ಥೆಯ ಆಶಯ, ಗೋವಾ ಪ್ರವಾಸೋದ್ಯಮ ಅಭಿವೃದ್ಧಿಗೆ ಕನ್ನಡಿಗರ ಕೊಡುಗೆ ಮನವರಿಕೆ ಮಾಡಿಕೊಡಲಾಗುವುದು. ನಂತರ ದೆಹಲಿಗೆ ತೆರಳಿ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.