ಕಲಬುರ್ಗಿ: ‘ರಾಷ್ಟ್ರಪತಿ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡುವ ಸಲುವಾಗಿ ಜಾತ್ಯತೀತ, ಪ್ರಗತಿಪರ ಆಶಯ ಹೊಂದಿರುವ ಪಕ್ಷಗಳೊಂದಿಗೆ ಚರ್ಚಿಸಲಾಗುವುದು’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
‘ವಿವಿಧ ಪಕ್ಷಗಳ ಸಮಾನ ಮನಸ್ಕ ಮುಖಂಡರ ಸಲಹೆ ಮತ್ತು ಸೂಚನೆಗಳನ್ನು ಪರಿಗಣಿಸಿ ನಮ್ಮ ಪಕ್ಷದ ಹೈಕಮಾಂಡ್ ಅಭ್ಯರ್ಥಿ ಬಗ್ಗೆ ನಿರ್ಣಯ ಕೈಗೊಳ್ಳಲಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
‘ಕಾಶ್ಮೀರದಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಅರಾಜಕತೆ ವಾತಾವರಣ ಉಂಟಾಗಿದೆ. ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ಮಧ್ಯೆಪ್ರವೇಶಿಸಿ, ಸಮಸ್ಯೆಯನ್ನು ಪರಿಹರಿಸಬೇಕು’ ಎಂದರು.