ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ

Last Updated 24 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಕಲಬುರ್ಗಿ: ‘ರಾಷ್ಟ್ರಪತಿ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡುವ ಸಲುವಾಗಿ ಜಾತ್ಯತೀತ, ಪ್ರಗತಿಪರ ಆಶಯ ಹೊಂದಿರುವ ಪಕ್ಷಗಳೊಂದಿಗೆ ಚರ್ಚಿಸಲಾಗುವುದು’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

‘ವಿವಿಧ ಪಕ್ಷಗಳ ಸಮಾನ ಮನಸ್ಕ ಮುಖಂಡರ ಸಲಹೆ ಮತ್ತು ಸೂಚನೆಗಳನ್ನು ಪರಿಗಣಿಸಿ ನಮ್ಮ ಪಕ್ಷದ ಹೈಕಮಾಂಡ್‌ ಅಭ್ಯರ್ಥಿ ಬಗ್ಗೆ ನಿರ್ಣಯ ಕೈಗೊಳ್ಳಲಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

‘ಕಾಶ್ಮೀರದಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಅರಾಜಕತೆ ವಾತಾವರಣ ಉಂಟಾಗಿದೆ. ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ಮಧ್ಯೆಪ್ರವೇಶಿಸಿ, ಸಮಸ್ಯೆಯನ್ನು ಪರಿಹರಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT