ಚೆನ್ನೈ: ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಮತ್ತು ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಹಾಗೂ ಅವರ ಕುಟುಂಬದವರನ್ನು ಪಕ್ಷದಿಂದ ಹೊರಹಾಕಬೇಕು ಎಂಬ ಎರಡು ಬೇಡಿಕೆಗಳನ್ನು ಮಾಜಿ ಮುಖ್ಯಮಂತ್ರಿ ಒ. ಪನ್ನೀರ್ಸೆಲ್ವಂ ಬಣ ಎಐಎಡಿಎಂಕೆ ಮುಂದಿಟ್ಟಿದೆ.
ಜಯಲಲಿತಾ ಅವರ ಸಾವು ಕೋಟ್ಯಂತರ ಜನರಲ್ಲಿ ಅನುಮಾನ ಮೂಡಿಸಿದೆ. ಹೀಗಾಗಿ ಅದರ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಬಣದ ಮುಖಂಡ ಕೆ.ಪಿ. ಮುನುಸ್ವಾಮಿ ಸೋಮವಾರ ಒತ್ತಾಯಿಸಿದ್ದಾರೆ.
ಶಶಿಕಲಾ ಮತ್ತು ಅವರ ಕುಟುಂಬ ವರ್ಗವನ್ನು ಪಕ್ಷದಿಂದ ಹೊರಹಾಕಬೇಕು ಎಂದು ಷರತ್ತು ಹಾಕಿದ್ದಾರೆ.