ಗದಗ: ಜಿಲ್ಲೆಯಲ್ಲಿರುವ ತೆರೆದ ಕೊಳವೆ ಬಾವಿಗಳನ್ನು ಮುಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಜೈ ಭೀಮ ಸೇನಾ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಹುಬ್ಬಳ್ಳಿ ಒತ್ತಾಯಿಸಿದ್ದಾರೆ.ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬತ್ತಿಹೋಗಿರುವ ನೂರಾರು ಕೊಳವೆ ಬಾವಿಗಳನ್ನು ಶೀಘ್ರವೇ ಮುಚ್ಚಿಸಬೇಕು ಇಲ್ಲದಿದ್ದರೇ, ಮಕ್ಕಳು ಸಮಸ್ಯೆಯಲ್ಲಿ ಸಿಲುಕುತ್ತಾರೆ. ಆದ್ದರಿಂದ ಸರ್ಕಾರ ಎಚ್ಚೆತ್ತುಕೊಂಡು ಕೊಳವೆ ಬಾವಿಗಳನ್ನು ಮುಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.