ಪುಷ್ಪ ನಮನ: ಹುಬ್ಬಳ್ಳಿ ಆಟೊ ರಿಕ್ಷಾ ಮಾಲಿಕರ ಹಾಗೂ ಚಾಲಕರ ಸಂಘದ ಪದಾಧಿಕಾರಿಗಳು ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದರು.ಡಾ. ರಾಜ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಜಯಕಾರ ಹಾಕಿದರು. ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ, ಪದಾಧಿಕಾರಿಗಳಾದ ಮುಸ್ತಾಕ್ ಕರ್ಜಗಿ, ಚಿದಾನಂದ ಸವದತ್ತಿ, ಬಸವರಾಜ ಉಣಕಲ್, ಪರಶುರಾಮ ಪೂಜಾರ, ಹನುಮಂತ ಮುಳಗುಂದ, ರಫೀಕ್ ಕುಂದಗೋಳ, ಅಪ್ಪಣ್ಣ ಬ್ಯಾಡಗಿ ಇದ್ದರು.