ನಾಯಕ ವಿರಾಟ್ ಕೊಹ್ಲಿ, ಕ್ರಿಸ್ಗೇಲ್, ಎಬಿ ಡಿ ವಿಲಿಯರ್ಸ್, ಕೇದಾರ್ ಜಾಧವ್ ಅವರನ್ನೊಳಗೊಂಡ ಆರ್ಸಿಬಿ ಬ್ಯಾಟಿಂಗ್ ವಿಭಾಗದಲ್ಲಿ ಬಲಿಷ್ಠವಾಗಿದ್ದರೂ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗುತ್ತಿದೆ. ಜತೆಗೆ ಬೌಲಿಂಗ್ನಲ್ಲಿ ಸ್ಪಿನ್ನರ್ ಯಜುವೇಂದ್ರ ಚಹಾಲ್ ಮತ್ತು ಪವನ್ ನೇಗಿ ಹೊರತುಪಡಿಸಿ ಉಳಿದ ಬೌಲರ್ಗಳು ಹೆಚ್ಚು ಪರಿಣಾಮಕಾರಿಯಾಗದಿರುವುದು ಹಿನ್ನಡೆಯಾಗಿದೆ.