ನವದೆಹಲಿ: ಪರೀಕ್ಷೆಗಳಲ್ಲಿ ಕಠಿಣ ಪ್ರಶ್ನೆಗಳಿಗೆ ಕೃಪಾಂಕ ನೀಡುವ ಪದ್ಧತಿ ರದ್ದುಪಡಿಸುವ ಬಗ್ಗೆ ಆಯಾ ರಾಜ್ಯಗಳ ಶಿಕ್ಷಣ ಮಂಡಳಿಗಳೇ ನಿರ್ಧಾರ ಕೈಗೊಳ್ಳಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) ಸೋಮವಾರ ಕಠಿಣ ಪ್ರಶ್ನೆಗಳಿಗೆ ಕೃಪಾಂಕ ನೀಡುವ ಪದ್ಧತಿ ರದ್ದುಪಡಿಸಿ ಮಹತ್ವದ ನಿರ್ಣಯ ಕೈಗೊಂಡಿತ್ತು. ಆದರೆ, ವಿದ್ಯಾರ್ಥಿಗಳು ತೇರ್ಗಡೆಯಾಗಲು ಕೆಲವೇ ಅಂಕಗಳು ಅಗತ್ಯವಿದ್ದರೆ ಕೃಪಾಂಕ ನೀಡುವ ಪದ್ಧತಿಯನ್ನು ಮುಂದುವರಿಸಲು ನಿರ್ಧರಿಸಿತ್ತು.
ಈ ಬಗ್ಗೆ ಜಾವಡೇಕರ್ ಅವರು ಪ್ರತಿಕ್ರಿಯಿಸಿ, ‘ಇದು ಉತ್ತಮ ನಿರ್ಧಾರ. ಆದರೆ, ಅಂತಿಮ ನಿರ್ಣಯವನ್ನು ರಾಜ್ಯಗಳೇ ಕೈಗೊಳ್ಳಲಿವೆ’ ಎಂದರು.