‘ಅಗತ್ಯವಿದ್ದರೆ ಸಿಐಡಿ ಅಧಿಕಾರಿಗಳು ರಾಷ್ಟ್ರಪತಿಯಿಂದ ಅರ್ಜಿದಾರರ ವಿರುದ್ಧ ಪ್ರಾಸಿಕ್ಯೂಷನ್ಗೆ ಪೂರ್ವಾನುಮತಿ ಪಡೆದು ಪ್ರಕರಣ ಮುಂದುವರಿಸಬಹುದು’ ಎಂದು ನ್ಯಾಯಪೀಠ ಇದೇ ವೇಳೆ ಸ್ಪಷ್ಟಪಡಿಸಿದೆ.
‘2011ನೇ ಸಾಲಿನ ‘ಎ’ ಮತ್ತು ‘ಬಿ’ ವೃಂದದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವೇಳೆ ಮಂಗಳಾ ಶ್ರೀಧರ್ ಅಕ್ರಮ ನಡೆಸಿದ್ದಾರೆ’ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವತಿಯಿಂದ ದೂರು ದಾಖಲಿಸಲಾಗಿತ್ತು.
‘ನನ್ನ ವಿರುದ್ಧದ ವಿಚಾರಣೆಗೆ ರಾಷ್ಟ್ರಪತಿಯಿಂದ ಪೂರ್ವಾನುಮತಿ ಪಡೆಯಬೇಕು. ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಪ್ರಕರಣ ರದ್ದುಪಡಿಸಬೇಕು’ ಎಂದು ಮಂಗಳಾ ಕೋರಿದ್ದರು.