ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೌಡಿಯ ಹತ್ಯೆ

Last Updated 25 ಏಪ್ರಿಲ್ 2017, 19:54 IST
ಅಕ್ಷರ ಗಾತ್ರ

ಬೆಂಗಳೂರು:  ಆವಲಹಳ್ಳಿ ಸಮೀಪದ  ಬಿಡಿಎ ಬಡವಾಣೆ ಶೆಡ್‌ನಲ್ಲಿ ಸೋಮವಾರ ಬೆಳಗಿನ ಜಾವ ರೌಡಿ ಉಮೇಶ್‌ (30) ಎಂಬಾತನನ್ನು ದುಷ್ಕರ್ಮಿಗಳು ಹೊಟ್ಟೆ, ಎದೆಗೆ 12 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

2012ರಲ್ಲಿ ಜಾನ್ ಪಾಷಾ ಎಂಬುವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಉಮೇಶ್ ವಿರುದ್ಧ ತಲಘಟ್ಟಪುರ ಠಾಣೆಯಲ್ಲಿ ರೌಡಿ ಪಟ್ಟಿ ತೆರೆಯಲಾಗಿತ್ತು. ಈ ನಡುವೆ ಅಪರಾಧ ಚಟುವಟಿಕೆಗಳಿಂದ ದೂರ ಉಳಿದಿದ್ದ ಆತ, ಕೂಲಿ ಕೆಲಸ ಮಾಡಿಕೊಂಡು ತಂದೆ ಜತೆ ಶೆಡ್‌ನಲ್ಲಿ ವಾಸವಾಗಿದ್ದ.

ಕಂಪೆನಿಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿರುವ ಆತನ ತಂದೆ, ಭಾನುವಾರ ರಾತ್ರಿ 1 ಗಂಟೆಗೆ ಕೆಲಸಕ್ಕೆ ತೆರಳಿದ್ದರು. ಪಾಷಾ ಕೊಲೆಗೆ ಪ್ರತೀಕಾರವಾಗಿ ಈ ಹತ್ಯೆ ನಡೆದಿರುವ ಸಾಧ್ಯತೆ ಇದೆ. ಅನುಮಾನದ ಮೇಲೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT