‘ಅರಿವು’ ಯೋಜನೆಗೆ ₹ 100 ಕೋಟಿ ಮೀಸಲು
ಬೆಂಗಳೂರು: ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ನೀಡುವ ಶಿಕ್ಷಣ ಸಾಲದ ‘ಅರಿವು’ ಯೋಜನೆಗೆ ಈ ಸಾಲಿನಲ್ಲಿ ₹ 100 ಕೋಟಿ ಮೀಸಲಿಡಲಾಗಿದೆ ಎಂದು ಶಿಕ್ಷಣ ಮತ್ತು ವಕ್ಫ್ ಸಚಿವ ತನ್ವೀರ್ ಸೇಠ್ ಹೇಳಿದರು.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮಂಗಳವಾರ ಏರ್ಪಡಿಸಿದ್ದ ‘ಅರಿವು’ ಹೊಸ ತಂತ್ರಾಂಶ ಚಾಲನೆ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದರು.